ಪ್ರಾರ್ಥನೆ - ಶ್ರೀ ಕಾ.ಹಿ. ರಾಧಾಕೃಷ್ಣ
ಬಿಡುಗಡೆ
೧
ಶೂದ್ರಕೋಳಿ ಮೇಯುತಿತ್ತು
ಗಲ್ಲಿಯಲ್ಲಿ;
ಬ್ರಾಹ್ಮನಾಯಿ ಹೊಂಚುತಿತ್ತು
ಅಲ್ಲಿ ಇಲ್ಲಿ.
ಶೂದ್ರಕೋಳಿಗೇನು ಗೊತ್ತು,
ಪಾಪ, ನಾಯಿ ಬ್ರಾಹ್ಮ ಎಂದು?
ತಮ್ಮ ಮನೆಯ ನಾಯಿಯಂತೆ
ಎಂದು ಸುಮ್ಮ ಮೇಯುತಿತ್ತು.
೨
ಬ್ರಾಹ್ಮನಾಯಿ ಅಪ್ಪಟ ಕಂತ್ರಿ.
ಆದರೇನು? ಕಪಟ ಕುತಂತ್ರಿ!
ಕೊರಳಿನಲ್ಲಿ ಜನ್ನಪಟ್ಟೆ;
ಒಡಲಿನಲ್ಲಿ ಖಾಲಿಹೊಟ್ಟೆ!
ಮೆಲ್ಲ ಮೆಲ್ಲ ಸುಳಿದು ಸುತ್ತಿಹತ್ತೆ ಬಂತು;
ಸಾಧು ಎಂದು ಶೂದ್ರಕೋಳಿ
ನೋಡೆ ನಿಂತು,
ಹಾರಿ ನೆಗೆದು ಹಿಡಿದುಕೊಂಡು
ಓಡಿ ಹೋಯ್ತು!
ಪಾರ್ವವೀಡಿನೊಂದು ಗೋಡೆ
ರಕ್ಷೆಯಾಯ್ತು:
ಪಾರ್ವನಾಯ್ಗೆ ಶೂದ್ರಕೋಳಿ
ಭಕ್ಷ್ಯವಾಯ್ತು!
೩
ಮರಿಯತನದಿ ಮೊದಲುಗೊಂಡು
ಸಾಕಿ ಸಲಹಿ ಒಲಿದ ತನ್ನ
ಪುಟ್ಟ ಮುದ್ದು ಹುಂಜಗಾಗಿ,
ಕರುಣ ತುಂಬಿದೆದೆಯ ದೇವಿ,
ಗೊಳೋ ಎಂದು ಹುಡುಗಿಯೊಂದು
ಅಳುತಲಿತ್ತು.
’ಶುದ್ಧ ಶೂದ್ರ ಹುಡುಗಿ’ ಎಂದು
ಹಾರ್ವನೊಡನೆ ಹಾರ್ತಿ ನಿಂದು,
ಕೇಳಿಗಾಗಿ ಗೇಲಿ ಮಾಡಿ
ಬೀದಿ ಬಾಗಿಲಲ್ಲಿ ಕೂಡಿ
ಬ್ರಾಹ್ಮವೃಂದ ಚೆಂದ ನೋಡಿ
ನಗುತಲಿತ್ತು!
ಬಂದನಿದೊ ಕೋಕಿಲೋಲ್ಲಾಸ ಚೈತ್ರಂ, ಕವಿಯಎಂದು ಕವಿತೆ ಆರಂಭವಾಗುತ್ತದೆ. ಮೇ ಮೊದಲ ವಾರವೆಂದರೆ ವಸಂತಕಾಲದ ಸಂಭ್ರಮದ ಕಾಲ. ಕವಿಪುತ್ರನ ಜನನನ್ನಕ್ಕಾಗೆ ಲೋಮಮಾತೆ ಸಹ್ಯಾದ್ರಿಯ ವನರಂಗದಲ್ಲಿ ವಸಂತೋತ್ಸವವನ್ನು ನಡೆಸುತ್ತಿದ್ದಾಳೆ. ಮುಂದೆ ವಸಂತದ ವರ್ಣನೆ ಬರುತ್ತದೆ. ಅಂತಹ ವಸಂತಕಾಲದಲಿ ಜನಿಸಿದ ಪುತ್ರನಿಗೆ ಕೋಕಿಲೋದಯ ಚೈತ್ರ ಎಂಬ ಹೆಸರನ್ನು ಕವಿ ಟಂಕಿಸುತ್ತಾರೆ. ಮಗನ ಸ್ವಾಗತಕ್ಕೆ ಹೊಂಗೆ, ನೆಳಲ ನೆಯ್ಯುವ ಪಸುರ ಪೊಸತಳಿರುಡುಗೆಯನುಟ್ಟು, ತನ್ನ ಪಾದಕೆ ತಾನೆ ಕುಸುಮ ಧವಳಾಕ್ಷತೆಯ ರಂಗವಲ್ಲಿಯನಿಕ್ಕಿ ಸಿದ್ಧವಾಗಿತ್ತಂತೆ! ಹಳದಿಯ ಸಾಲ್ಮರ ಹೊನ್ನರಿಲ ಸೇಸೆಯ ಸೂಸಿ ಶುಭಕೋರಿ ಆಶೀರ್ವದಿಸಿತ್ತಂತೆ!
ಜೀವನ ಸುಖ ವಹಿತ್ರಂ. ಆಗಮನ ಸಂಭ್ರಮಕೆ
ಸಮೆದಿಹಳ್ ಲೋಕಮಾತೆಯೆ ವಸಂತೋದಾರ
ಸಹ್ಯಸೀಮೆಯ ವಿಪಿನರಂಗಮಂ.
ಉಲಿಯಿರೈ,ಎಂದು ಸಂಭ್ರಮಿಸುತ್ತಾರೆ. ತ್ರಿಮೂರ್ತಿಗಳು ತಮ್ಮ ತಮ್ಮ ಹೆಂಡತಿಯರ ಜೊತೆಯಲ್ಲಿ ಬಂದು ಕಂದನನ್ನು ಆಶೀರ್ವದಿಸಬೇಕೆಂದು ಬಯಸುತ್ತಾರೆ. ಜೊತೆಗೆ ತಮ್ಮ ಗುರುಗಳು, ಕವಿಗಳು ಬರಬೇಕೆನ್ನುತ್ತಾರೆ.
ಮಲೆಯ ನೋಟದ ಚೆಲ್ವು ತಾಂ ಬೀಣೆಯಾಗಲಾ
ಶಾಂತಿ ಮೌನದ ತಂತಿಯಂ ಮೀಂಟೆ ಮಿಡಿಯುತ್ತೆ
ಕವಿಗೆ ರಸರೋಮಾಂಚನವನೀವ, ಓ ಮಲೆಯ
ಗರಿವೆತ್ತ ರಸಿಕರಿರ, ಮುಂದೆ ನಿಮ್ಮೊಡನುಲಿವ
ಗಿರಿವನಪ್ರಿಯ ಸಖನ ಪುಣ್ಯ ಜನ್ಮೋತ್ಸವಂ
ಸಂಭವಿಸಿತಿಂದು!
ಬಲ್ಲಎಂದು ಮಗನಿಗೆ ಮೊದಲ ಕಾಣಿಕೆಯ ಕವನಪುಷ್ಪವನ್ನು ಅರ್ಪಿಸುತ್ತಾರೆ. ಅಲ್ಲಿಂದ ಹತ್ತು ದಿನಗಳ ನಂತರ ಮಗಿವಿಗೆ ನಾಮಕರಣವಾಗುತ್ತದೆ. ಕವಿ ಮಗ ಹುಟ್ಟಿದಂದೇ ಕೋಕಿಲೋದಯ ಚೈತ್ರ ಎಂದ ಹೆಸರಿಟ್ಟುಬಿಟ್ಟಿರುತ್ತಾರೆ. ಅಂದು ಸಹ ಅದೇ ಹೆಸರನ್ನು ಮಗನಿಗಿಟ್ಟು ಹರಸುತ್ತಾರೆ ’ಹೆಸರಿಟ್ಟು ಹರಸುವೆನು ಚೈತ್ರನಂ’ ಎಂಬ ಕವಿತೆಯ ಮೂಲಕ. ವಸಂತಸಂಭ್ರದಲ್ಲಿ ಹುಟ್ಟಿದ ಮಗನಾದ್ದರಿಂದ, ಮತ್ತೆ ವಸಂತದ ವರ್ಣನೆ ಕವಿತೆಯಾರಂಭದಲ್ಲಿ ತೆರೆದುಕೊಳ್ಳುತ್ತದೆ. ಆದರೆ ಆ ಸಂಭ್ರಮವೆಲ್ಲಾ ಮಗನ ನಾಮಕರಣಕ್ಕಾಗಿಯೇ! 'ಪೊಸಮಲರ ಕಂಪಾಂತ ತಂಬೆಲರ ಸೊಂಪು, ಮಲ್ಲಿಗೆ ಹೊದರಿನಲ್ಲಿ ಮಡಿವಳ ಹಕ್ಕಿಯ ಸಂಗೀತ, ಜಗದ ಜಡನಿದ್ದೆಯಂ ಬಡಿದೆಚ್ಚರಿಸುವಂತೆವೋಲ್ ಬಡಿದುಕೊಳ್ಳುತ್ತಿರುವ ಕ್ರೈಸ್ತ ದೇವಾಲಯದ ಗಂಟೆ' ಇವುಗಳ ನಡುವೆಯೇ ಮಗನ ನಾಮಕರಣ ನಡೆಯುತ್ತದೆ.
ಋಷಿಗಳುಂ, ಮತ್ತೆಲ್ಲ ಗುರುಗಳುಂ, ಮೇಣಖಿಲ
ಕವಿಗಳುಂ ಸರ್ವದೇವತೆಗಳುಂ ಬಂದಿಲ್ಲಿ
ಹರಸುತಿರೆ ದಿವ್ಯ ಕಂದನ ಜೀವಮಾನಮಂ,
ನೀಡುತಿರೆ ತಮ್ಮ ತಮ್ಮಾತ್ಮೀಯ ದಾನಮಂ,
ನಾನೀವೆನಿದೊ ನಿನಗೆ ಈ ಪ್ರೀತಿತಾನಮಂ,
ಮಂತ್ರಛಂದಃಪೂರ್ಣ ಕವಿಹೃದಗಾನಮಂ!
ತೇಜಸ್ವಿ ಸೋದರನೆ,ಮಗನನ್ನು ಆಶೀರ್ವದಿಸುತ್ತಾರೆ. ವಿಂಧ್ಯ ಸಹ್ಯಾದ್ರಿ ಮಲಯ ಪರ್ವತಗಳು, ಗಂಗಾ ಯಮುನ ತುಂಗಭದ್ರಾ ನದಿಗಳು ನಿನಗಕ್ಕೆ ಭಾರತದ ಬಾಲ್ಯದಾಡುಂಬೊಲದ ಸಂಗಾತಿಗಳ್! ಎನ್ನುತ್ತಾರೆ.
ಹೇಮಾಂಗಿನಿಯ ತನೂಭವನೆ, ಹೇ ನನ್ನಾತ್ಮ
ನವ್ಯತಾ ದೇವತಾ ಪ್ರತ್ಯಕ್ಷರೂಪಿ, ಓ
ಕೋಕಿಲೋದಯ ಚೈತ್ರ, ಹರಸುವೆನು ಹೆಸರಿಟ್ಟು,
ಹೆಸರಿನ ಹಿರಿಮೆ ಉಸಿರಿಗೂ ಬರಲಿ ಎಂದೊಲಿದು
ಬಯಸಿ:
ಸರ್ವಲೋಕ ಶೈಲೇಶ್ವರಂತನ್ನ ಕಂದನಿಗೆ ಶಂಕರರ ಶ್ರೀಬುದ್ಧಿ, ರಾಮಾನುಜರ ಹೃದ, ಕ್ರಿಸ್ತ ಬುದ್ಧರ ಮಹಾಸಾತ್ವಿಕ ಕೃಪಾಸ್ಥೈರ್ಯ, ಗಾಂಧಿಯ ದಯಾ ಧೈರ್ಯ, ಶ್ರೀರಾಮಕೃಷ್ಣ ಮತ್ತು ವಿವೇಕನಂದರ ಧರ್ಮದೌದಾರ್ಯದ ಸಮಸ್ತ ಶ್ರೇಯಸ್ಸುಗಳು ಬಂದು ಆಶೀರ್ವದಿಸಬೇಕೆಂದು ಬಯಸುತ್ತಾರೆ. ಮುಂದುವರೆದು,
ನಿನಗಕ್ಕೆ ತಾಂ ಪ್ರತಿಸ್ಪರ್ಧಿ, ಹೈಮಾಚಲಂ,
ಧವಳಗಿರಿ ಶಿರವರೇಣ್ಯಂ, ಮಾನಸ ಸರೋ
ಜನ್ಮ ಮಹಿಮಂ! ಶ್ವಾಸಕೋಶಗಳಕ್ಕೆ ನಿನಗೆ
ಸಾಗರಾಕಾಶಂಗಳ್!
ನಿಖಿಲ ಭುವನ ಶ್ರೇಷ್ಠ ಗಾಯಕರ್ಇಲ್ಲಿಯವರೆಗೆ ಮಗನ ಭವಿಷ್ಯತ್ತಿಗೆ ಆಶೀರ್ವಾದದ ತೋರಣವನ್ನೈದುತ್ತಿದ್ದ ಕವಿಯ ಮನಸ್ಸು, ಇದ್ದಕ್ಕಿದ್ದಂತೆ, ಫ್ರಾನ್ಸಿನಲ್ಲಿದ್ದ ತನ್ನ ಶ್ರೀಗುರು ಸಿದ್ದೇಶ್ವರಾನಂದರ ಕಡೆಗೆ ತಿರುಗುತ್ತದೆ. ಎರಡನೆಯ ಮಹಾಯುದ್ಧದ ಮಾರಕ ಯಜ್ಞದ ಮಧ್ಯೆ ಸಿಕ್ಕಿದ್ದ ಅವರ ಕ್ಷೇಮಕ್ಕಾಗಿ ಕಾತರಿಸಿ ಪ್ರಾರ್ಥಿಸುತ್ತದೆ. ಮಗನ ಹರಕೆಯೆಂತೆಯೇ ಹಿರಿಯ ಹರಕೆ ಗುರುವಿನ ಕ್ಷೇಮ ಎಂದು ಭಾವಿಸುತ್ತದೆ.
ಶಿಲ್ಪಿಗಳ್ ವರ್ಣಶಿಲ್ಪಿಗಳೆಲ್ಲರೈತಂದು
ತಂತಮ್ಮ ದಿವ್ಯಕಲೆಯಂ ಪ್ರಚೋದಿಸಲಿ ಮೇಣ್
ಪ್ರಿಯದಿಂ ಪ್ರತಿಷ್ಠಿಸಲಿ ಈ ನನ್ನ ಚಿಣ್ಣನೀ
ಕೋಕಿಲೋದಯ ಚೈತ್ರನಾತ್ಮಮಂದಿರದಮೃತ
ಪೀಠದಲಿ!
ಈ ಹರಕೆಗಿಂ ಮಿಗಿಲ್ ಹಿರಿಹರಕೆಎಂದು ತನ್ನ ಗುರುವಿನ ಕ್ಷೇಮಕ್ಕಾಗಿ ನನ್ನ ಜೊತೆ ನೀನು ಬೇಡಿಕೊ ಎಂದು ತನ್ನ ಮಗನನ್ನು ಕೇಳಿಕೊಳ್ಳುತ್ತಾರೆ. ಈ ಪ್ರಾರ್ಥನೆಯ ಕಾಲಕ್ಕಾಗಲೇ ಹಿಟ್ಲರನ ಗೂಢಚರ ಸೇನೆ ಪ್ರಾನ್ಸನ್ನು ಆಕ್ರಮಿಸಿತ್ತು. ಪಾರಂಪರಿಕವಾದ ಪ್ಯಾರಿಸ್ ನಗರ ಹಾಳಾಗಬಾರದೆಂದು ಅದನ್ನು 'ತೆರೆದನಗರ'ವೆಂದು ಘೋಷಿಸಲಾಗಿತ್ತು. ಸ್ವಾಮೀಜಿ ಸರ್ಕಾರದ ಅಧೀನದಲ್ಲಿರಬೇಕಾಗಿತ್ತು. ಅವರ ಕ್ಷೇಮಕ್ಕಾಗಿ ಕವಿಯ ಪ್ರಾರ್ಥನೆಯೊಂದಿಗೆ ಕವಿತೆ ಮುಕ್ತಾಯವಾಗುತ್ತದೆ.
ಇರ್ಪೊಡಾ ಹರಕೆಯಂ ಯೋಗ ದಿವ್ಯಜ್ಞಾನಿ
ಜಗದೀಶ್ವರಗೆ ಬಿಡುವೆನೈ; ಬೇಡಿಕೊಳ್, ಕಂದಾ!
ನೀನ್ ಬಂದ ಈ ಜಗಂ ನೀನ್ ಬಿಡುವ ಆ ಜಗಕೆಕವಿಯ ಪ್ರಾರ್ಥನೆ ಹುಸಿಯಾಗಲಿಲ್ಲ. ಪ್ರಭಾವಶಾಳಿ ಭಕ್ತಮಿತ್ರರ ನೆರವಿನಿಂದ ಸ್ವಾಮೀಜಿ ಪಾರಾದರು. ಯುದ್ಧಾನಂತರ 1945ರಲ್ಲಿ ಮತ್ತೆ ಪ್ಯಾರಿಸ್ಸಿಗೆ ಬಂದು ಗ್ರಟ್ಸ್'ನಲ್ಲಿ 'ಸೆಂಟರ್ ಫಾರ್ ವೇದಾಂತಿಕ್ ರಾಮಕೃಷ್ಣ' ಸಂಸ್ಥೆಯನ್ನು ಪುನರುಜ್ಜೀವನಗೊಳಿಸುತ್ತಾರೆ. ಮುಂದೆ 1957ರಲ್ಲಿ ಅವರು ನಿಧನರಾಗುವವರೆಗೂ ಕವಿಯೊಂದಿಗೆ ಪತ್ರ ಸಂಪರ್ಕದಲ್ಲಿದ್ದ ಸ್ವಾಮಿಗಳು, ಪುಸ್ತಕಗಳನ್ನು ಕಳುಹಿಸುತ್ತಾ ತಮ್ಮ ಪ್ರಿಯ ಶಿಷ್ಯನಿಗೆ ಜಗತ್ತಿನ ಜ್ಞಾನದ ಹೊಸ ಹೊಸ ಮುಖಗಳಿಗೆ ಬಾಗಿಲುಗಳನ್ನು ತೆರೆದು ಹೊಸಬೆಳಕಿನ ವಲಯಕ್ಕೆ ಕವಿಯನ್ನು ನೂಕುತ್ತಿದ್ದರು. "ನನ್ನ ಚೇತನೋದ್ಬೋಧಕ್ಕೆ ಅವರಿಂದಾದ ದೈವೀ ಉಪಕಾರವನ್ನು ನೆನೆದು ನನ್ನ ಭಕ್ತಿ 9.1.1960ರಲ್ಲಿ ಉದಯರವಿಯ ದೇವರ ಮನೆಯಲ್ಲಿ ಧ್ಯಾನದ ಕಾಲದಲ್ಲಿ ರಚಿಸಿದ 'ಕೃತಜ್ಞತೆ' ಎಂಬ ಕವನವನ್ನು ಇಲ್ಲಿ ಅರ್ಪಿಸುತ್ತಿದ್ದೇನೆ" ಎಂದು ನೆನಪಿನ ದೋಣಿಯಲ್ಲಿ ದಾಖಲಿಸಿದ್ದಾರೆ. ಹಾಗೆ ಅರ್ಪಿಸಿದ ಕವಿತೆಯ ಪೂರ್ಣಪಾಠ ಇಲ್ಲಿದೆ.
ಕೀಳಾಗುವಂತೆ ಬಾಳ್: ಇಂದಲ್ಲಿ, ಪಶ್ಚಿಮದಿ
ಮಾನವೀಯತೆ ಮಾಣ್ದು ತಾಂಡವಂಗೈಯುತಿದೆ
ನೀಚ ರಾಕ್ಷಸತೆ, ಯಾಂತ್ರಿಕ ಕ್ರೌರ್ಯದಾ ರುದ್ರ
ರಣದಲಿ. ಪೆಣ್ಗಳಂ ಮಕ್ಕಳಂ ಬಲಿಗೆಯ್ದು
ತಣಿಸುತಿರುವರು ಸಮರಚಂಡಿಯಂ. ಸೆಣಸುತಿವೆ
ಹಣೆಗೆ ಹಣೆ ಘಟ್ಟಿಸುತ್ತಿರೆಡು ದುಶ್ಯಕ್ತಿಗಳ್
ಲೋಕ ಚಕ್ರಾಧಿಪತ್ಯಕ್ಕೆ. ಆ ದುಷ್ಕರ್ಮ
ಶಕ್ತಿದ್ವಯಂಗಳುಂ ಹೇಳ ಹೆಸರಿಲ್ಲದೆಯೆ
ಒಂದರಿಂದೊಂದಳಿದು ಶೋಕವೊಂದುಳಿಯಲಾ
ಶೋಕಕೊಂದೊಳ್ಪಿನಾಕಾರಮಂ ನೀಡಲ್ಕೆ
ನೀಂ ಸತ್ಕೃತಿಯ ಲಸಚ್ಛಲ್ಪಿವರನಾಗೆಂದು
ಹರಸುವೆನು; ಹರಸುವೆನೊ ಗುರುದೇವನಂ ನುತಿಸಿ; ಮೇಣ್
ನನ್ನನಾಶೀರ್ವದಿಸಿ ಗೃಹಸ್ಥಾಶ್ರಮಕ್ಕೊಯ್ಸು,
ಧರ್ಮದೌದಾರ್ಯಮಂ ಪೇಳೆ ಪಶ್ಚಿಮಕೆಯ್ದಿ,
ಐರೋಪ್ಯ ಯುದ್ಧದಾ ಕ್ರೌರ್ಯ ಭೂಮಿಯೊಳಿರ್ಪ
ನನ್ನ ಆ ಸಿದ್ಧೇಶ್ವರಾನಂದ ಸ್ವಾಮೀಜಿಗೆ
ಸುಕ್ಷೇಮಮಕ್ಕೆಂದು ಬಯಸಿ ನಲ್ಬಯಕೆಯಂ!
1
ಗುರುವಿನೆಡೆಗೆ ಕರೆದ ಗುರುವೆ,
ನನ್ನ ಜೀವ ದೇವತರುವೆ,
ನಿಮ್ಮನೆಂತು, ಹೇಳಿ ಮರೆವೆ?
ನೆ ನೆ ವೆ
ಕೃತಜ್ಞತೆಯೊಳನುದಿನ!
2
ಮಾನ್ಯರಲ್ಲಿ ಪರಮ ಮಾನ್ಯ!
ಸಾಮಾನ್ಯರಲಿ ಸಾಮಾನ್ಯ!
ನಿಮ್ಮ ಕೃಪೆಯೊಳಾದೆ ಧನ್ಯ.
ನಿ ಮ್ಮ
ನೆನೆವುದೆನೆಗೆ ಪೂಜನ!
3
ಸತಿಯನೊಲಿದು ನಿಮ್ಮ ನೆನೆವೆ;
ಸುತರ ನಲಿಸಿ ನಿಮ್ಮ ನೆನೆವೆ;
ಕೃತಿಯನೋದಿ ನಿಮ್ಮ ನೆನೆವೆ;
ನಿ ಮ್ಮ
ನೆನೆವುದಾತ್ಮ ಸಾಧನೆ!
4
ಅಹೈತುಕೀ ಕೃಪಾಸಿಂಧು,
ನಿಷ್ಕಾರಣ ಆತ್ಮಬಂಧು,
ಅಂದಿನಂತೆ ಇಂದು ಮುಂದು
ಇರಲಿ ನನಗೆ ಎಂದೆಂದೂ,
ನಿ ಮ್ಮ
ಮೈತ್ರಿಯ ಅನುಮೋದನೆ!
ಶಿವಮೊಗ್ಗೆಗೆ ಧಾವಿಸಿತ್ತು ಕವಿಯ ಕಾರುದೂರದ ಪಯಣ. ವೇಗವಾಗಿ ಚಲಿಸುತ್ತಿರುವ ಕಾರು. ಅದರೊಳಗೆ ಕುಳಿತ ಕವಿಗೆ ಉಂಟಾಗಿದ್ದ ದೀರ್ಘ ಪಯಣದ ಏಕತಾನತೆಯ ಬೇಸರ ’ಕರಿಯ ರಸ್ತೆ ಹಾವು ಹರಿಯುತಿತ್ತು ಸರ್ಪಿಸಿ’ ಎಂಬ ಸಾಲಿನಲ್ಲಿ ವ್ಯಕ್ತವಾಗಿದೆ. ಆಗ ಆ ಕಾರಿನಲ್ಲಿ ಇನ್ನೂ ಯಾರ್ಯಾರು ಇದ್ದರು? ಕಾರು ಯಾವುದು? ಡ್ರೈವರ್ ಯಾರು?
ಕಾಲದೇಶ ಲಗ್ಗೆಗೆ ಕ್ಷಣಕ್ಷಣಕ್ಷಣಕ್ಕೆ ಮೈಲಿ ಮೈಲಿ ಮೈಲಿ
ಹಾರುತ್ತಿತ್ತು ಕವಿಯ ಕಾರು:
ತೇಲುತಿತ್ತು ಚಿಮ್ಮುತಿತ್ತು ಈಜುತಿತ್ತು ಮಿಂಚುತಿತ್ತು
ಸಿಮೆಂಟು, ಟಾರು!
ಉಬ್ಬು ತಗ್ಗು ನೇರ ಡೊಂಕು
ಕರಿಯ ರಸ್ತೆ ಹಾವು ಹರಿಯುತಿತ್ತು
ಸರ್ಪಿಸಿ!
ಕವಿ: ವೈಸ್ ಛಾನ್ಸಲರ್!ಇವರುಗಳ ಜೊತೆಯಲ್ಲಿ ಹಿಂದಿನ ಸೀಟಿನಲ್ಲಿ ಕುಳಿತು ಪಯಣಿಸುತ್ತಿದ್ದ ಕವಿಗೆ, ಕಾರಿನ ವೇಗ ’ಜವದ ಹುಚ್ಚೆ ಹಿಡಿಯಿತೇನೊ ಪೆಟ್ರೋಲಿಗೆ’ ಅನ್ನಿಸಿಬಿಟ್ಟಿದೆ. ಅವುಗಳ ನಡುವೆಯೂ ಕಾರ್ತಿಕ ಮಾಸಜ ನೆಲ, ಮುಗಿಲು, ನೀಲ ಬಾನು, ಎಪ್ಪತ್ತೈದು ಮೈಲಿಯ ವೇಗದಲ್ಲಿರುವ ಕಾರು ಎಲ್ಲವನ್ನೂ ಕವಿ ಗಮನಿಸುತ್ತಿದ್ದಾರೆ. ಕಾರಿನ ಸ್ಪೀಡಾಮೀಟರ್ ಕಡೆ ಕಣ್ಣು ಹಾಯಿಸುತ್ತಾರೆ. ಕಾರಿನ ಹೆಚ್ಚಿದ ವೇಗವನ್ನು ’ಗೂಳಿಗಣ್ಣ ಸ್ಪೀಡಾಮೀಟರ್ ಕೂಗಿ ಹೇಳುತ್ತಿತ್ತು.’
ಕಾರ್ : ಸ್ಟುಡಿಬೇಕರ್!
ಸದ್ಯದ ಡ್ರೈವರ್ : ಪೂರ್ಣಚಂದ್ರ ತೇಜಸ್ವಿ!
ಅವನ ಪಕ್ಕ ನಿಜ ಡ್ರೈವರ್!
"ಬೇಡ ಕಣೋ ಇಷ್ಟು ಸ್ಪೀಡು!ಚಾಲಕನಾಗಿ ಕುಳಿತಿದ್ದ ತೇಜಸ್ವಿಗೆ ಆಗಿನ್ನೂ ಹದಿನೆಂಟು ವರ್ಷ ತುಂಬಿದೆ ಅಷ್ಟೆ. ಬಹುಶಃ ಡೈವಿಂಗ್ ಲೈಸೆನ್ಸ್ ಬಂದು ಕೆಲವು ದಿನಗಳಷ್ಟೇ ಕಳೆದಿದ್ದರಬಹುದು. ಆದರೂ ಕಾರು ಚಾಲನೆಯಲ್ಲಿ ತೇಜಸ್ವಿ ಫಳಗಿಬಿಟ್ಟಿದ್ದಾರೆ. ನಿಜವಾದ ಡ್ರೈವರ್ ಇದ್ದರೂ, ಆತನನ್ನು ಪಕ್ಕದಲ್ಲಿ ಕುಳ್ಳಿರಿಸಿ, ಕಾರು ಚಾಲನೆಗಿಳಿದಿರುವ ತೇಜಸ್ವಿಯ ಮೇಲಿನ ನಂಬಿಕೆಯಿಂದ ಕವಿ ಕುಳಿತಿದ್ದಾರೆ. ಮಗನ ಉಡಾಫಿ ಉತ್ತರ ಬಹುಶಃ ಅವರಿಗೆ ದಿಗಿಲಿಕ್ಕಿಸಿರಬಹುದು. ಅದಕ್ಕೆ ’ಸರಿ, ಕಣ್ಣು ಮುಚ್ಚಿ ಕುಳಿತೆ:’ ಎನ್ನುತ್ತಾರೆ. ದೇವರ ಮೇಲೆ ಭಾರ ಹಾಕಿದ್ದಿರಬಹುದು! ಹಾಗೆ ಕಣ್ಣು ಮುಚ್ಚಿ ಕುಳಿತ ಕವಿ ಕಂಡಿದ್ದು ಮಾತ್ರ ಜಗದ್ಬವ್ಯ ದೃಶ್ಯವನ್ನು.
ಬಿಡಿ, ಅಣ್ಣಾ, ಸುಮ್ಮನಿರಿ,
ನನಗೆ ಗೊತ್ತಿದೆ!"
ಎಂದಿನಂತೆ ತೇಜಸ್ವಿಯ ಉಡಾಫಿ ಉತ್ತರ!
ದಕ್ಷಿಣೇಶ್ವರ! ಭವತಾರಿಣಿ!ಅಷ್ಟರಲ್ಲಿ ಕಾರಿನ ಚಕ್ರದಲ್ಲಿ ಏನೋ ಕಿರ್ರ್ ಎಂಬ ಶಬ್ದ! ’ಗಾಲಿ ವಾಲಿ ಸದ್ದು ಮಾಡತೊಡಗಿದೆ!’ ಆ ಶಬ್ದದ ನಡುವೆ ಮುಂದಿನ ಸೀಟಾಸೀನರಾಗಿದ್ದ ತೇಜಸ್ವಿ ಮತ್ತು ಡ್ರೈವರ್ ನಡುವೆ ನಡೆಯುವ ಸಂಭಾಷಣೆ ಕವಿಯ ಕಿವಿಯನ್ನಪ್ಪಳಿಸುತ್ತದೆ.
ಜಗದಂಬೆಗೆ ಚವರಿ ಬೀಸುತಿಹರು ಪರಮಹಂಸರು!
ಕೈಯ ಮುಗಿದು ನಿಂತು ನೋಡಿ ಧನ್ಯನಾಗುತ್ತಿದ್ದೆ.
"ಸ್ಟೀರಿಂಗೇಕೊ ಸರಿ ಇಲ್ಲ; ಸ್ವಲ್ಪ ಎಣ್ಣೆ ಬಿಡಬೇಕಿತ್ತೊ?"ಗಾಡಿ ನಿಲ್ಲುತ್ತದೆ. ಎಲ್ಲರೂ ಕೆಳಗಿಳಿಯುತ್ತಾರೆ. ಪರೀಕ್ಷೆ ನಡೆಯುತ್ತದೆ. ಮೆಷಿನರಿಗಳ ಮರಿ ಡಾಕ್ಟರ್ ತೇಜಸ್ವಿ ಸುಮ್ಮನಿರುತ್ತಾರೆಯೇ!?
"ನಿನ್ನೆ ಅಲ್ಲ ಮೊನ್ನೆ ತಾನೆ ಲೂಬ್ರಿಕೇಷನ್ ಆಗಿದೆ"
ಎಂದ ಡ್ರೈವರ್, ಡ್ರೈವ್ ಮಾಡುತ್ತಿದ್ದ ತೇಜಸ್ವಿಗೆ.
"ಚಕ್ರವೇಕೊ ಎಡದ ಕಡೆಗೆ ವಾಲುತ್ತಿದೆ!"
ಜಾಕ್ ಹೊರಗೆ ಬಂದಿತುಅರ್ಧ ಗಂಟೆ ರಿಪೇರಿ ನಂತರ ಮತ್ತೆ ಎಲ್ಲರೂ ಕಾರು ಏರಿ ಹೊರಡುತ್ತಾರೆ. ಸ್ವಲ್ಪ ದೂರ ಅಷ್ಟೆ. ಮತ್ತೆ ಚಕ್ರದಿಂದ ಕಿರೋ ಕಿರೋ ಶಬ್ದ ಬರುತ್ತದೆ. "ಫಿಷ್ ಪ್ಲೇಟ್...... ಟೈರ್ ರಾಡ್ ಎಂಡ್....." ಇನ್ನೂ ಏನೇನೊ ಶಬ್ದಗಳು ಕವಿಯ ಕಿವಿಗೆ ಬೀಳುತ್ತವೆ. ಆದರೆ, ಏನೆಂದು ಕವಿಗೆ ಅರ್ಥವಾಗುವುದಿಲ್ಲ. ಈ ಬಾರಿ ತೇಜಸ್ವಿ ಡ್ರೈವರ್ ಇಬ್ಬರೇ ಇಳಿಯುತ್ತಾರೆ. ಸ್ವಲ್ಪ ಒತ್ತಿನ ನಂತರ ಕವಿಯೂ ಬೇಸರದಿಂದಲೇ ಇಳಿಯುತ್ತಾರೆ; ಒಳಗೆ ಕೂರುವ ಬೇಸರದಿಂದ ತಪ್ಪಿಸಿಕೊಳ್ಳಲು. ಅವರಿಬ್ಬರ ಸಂಭಾಷಣೆ, ಅದರೊಂದಿಗೆ ರಿಪೇರಿ ಕಾರ್ಯಭಾರ ಮುಂದುವರೆಯುತ್ತದೆ.
ಗಾಡಿ ಮೇಲಕೆದ್ದಿತು.
ಚಕ್ರ ಬಿಚ್ಚಿದರು.
ಸ್ಪ್ಯಾನರ್-ಸ್ಕ್ರೂ ಡ್ರೈವರ್-ವ್ಹೀಲ್ ಸ್ಪ್ಯಾನರ್- ಟಕ್ ಟಕ್ ಟಕ್....
"ಚಕ್ರ ವಾಲಿ ಹೀಗೆ ಗಾಡಿ ನಡೆದರೆಈ ಎಲ್ಲಾ ರಿಪೇರಿ ಕರ್ಮವನ್ನು ಹುಡುಗರ ಬೇಜವಬ್ದಾರಿಯನ್ನು ಕಂಡು ಕವಿಗೆ ರೇಗುತ್ತದೆ.
ಬಹಳ ಕೆಟ್ಟದು" ಎಂದ ತೇಜಸ್ವಿ.
"ಹೌದು ಅಣ್ಣ" ಎಂದು ಡ್ರೈವರ್ ಪಲ್ಲವಿ!
ಮತ್ತೆ ಜಾಕು ಕೊಟ್ಟು ಕಾರು ಎದ್ದಿತು.
ಡ್ರೈವರ್ ಕಾರಿನ ಹೊಟ್ಟೆ ಅಡಿ ಅಡಗಿದ.
ದಾರವಿಟ್ಟು ಅಳೆದರು: ಏಕೊ ಏನೊ?
ಅದರ ಬದಲು ಕುಂಕುಮ ಹಚ್ಚಿದ್ದರೂ
ಆಗುತಿತ್ತೇನೊ!
"ಮೊನ್ನೆ ತಾನೆ ಲ್ಯೂಬ್ರಿಕೇಷನ್ ಮಾಡಿಸಿದೆ.ರೇಗಿದ ಕವಿಯಿಂದ ಡ್ರೈವರನಿಗೆ ಕಾರಿಗೆ ಸಹಸ್ರಾರ್ಚನೆ! ಜೊತೆಗೆ ಭೀಷ್ಮ ಪ್ರತಿಜ್ಞೆ ಬೇರೆ. ರಿಪೇರಿಯಲ್ಲೇ ಎರಡು ಗಂಟೆ ಕಳೆದ ಬೇಸರ. ಆದರೂ ಒಂದು ಸಲಹೆ ಕವಿಯಿಂದ ಬರುತ್ತದೆ.
ಇಂದು ಕಾರು ದಾರಿಯಲ್ಲಿ ತೊಂದರೆ ಕೊಡುತ್ತಿದೆ.
ನಿನಗೆ ತಲೆ ನೆಟ್ಟಗಿದ್ದರೆ ಹೀಗಾಗುತಿತ್ತೆ?
ನೀನೊಬ್ಬ ಡ್ರೈವರ್... ಕೆಲಸಕ್ಕೆ ಬಾರದವ...
ಬೆಪ್ಪು ಮುಂಡೇದು!...
ಹೀಗೆ ಸಹಸ್ರನಾಮ!....
ಇನ್ನೆಂದಿಗೂ ಈ ಡ್ರೈವರು ಈ ಕಾರು ನಂಬಿ
ದೂರ ಪಯಣಕ್ಕೆ ಹೊರಡುವುದಿಲ್ಲ.
ಇದೇ ಕೊಟ್ಟಕೊನೆ! ಇದೇ ಕೊಟ್ಟ ಕೊನೆ!"
"ಹೇಗಾದರು ಅರಸಿಕೆರೆಯವರೆಗೆ ಹೋಗಿಸಂಜೆಯಾಗಿದೆ. ಆ ಸಮಯದಲ್ಲಿ ಪ್ರತಿನಿತ್ಯ ಮೈಸೂರಿನ ಉದಯರವಿಯಲ್ಲಿ ದೀಪ ಹೊತ್ತಿಸುತ್ತಿದ್ದುದು ಕವಿಯ ನೆನಪಿಗೆ ಬರುತ್ತದೆ.
ವರ್ಕ್ಷಾಪಿನಲ್ಲಿ ತೋರಿಸಿ ಸರಿಪಡಿಸೋಣ!"
ಅದೇ ಹೊತ್ತಿನಲ್ಲಿಎಂದು ಮಗಳು ಅತ್ತ ಪ್ರಾರ್ಥನೆ ಮಾಡುತ್ತಿದ್ದರೆ, ಇತ್ತ ಡ್ರೈವರನ ಅನುಭವದ ತಲೆಗೆ ಏನೋ ಹೊಳೆದಂತಾಯ್ತು! "ಟೈರ್ ರಾಡ್ ಎಂಡ್ ಅಲೈನ್ಮೆಂಟ್ ನೋಡಬೇಕಿತ್ತಣ್ಣಾ..." ಎಂದು ರಾಗವೆಳೆಯುತ್ತಾನೆ. "ನಿನ್ನ ಬೆಪ್ಪುತಕ್ಕಡಿತನವ ಮುಚ್ಚಿಕೊಳ್ಳಲು ಏನೇನೋ ಬೊಗಳ್ತೀಯಾ!" ಎಂಬ ಕವಿಯ ಮಾತಿನ ನಡುವೆ ಮತ್ತೆ ಕಾರು ಚಕ್ರದ ಕೀರಲು ಸ್ವರ ಕೇಳಿಸುತ್ತದೆ. ಮರಿ ಯಂತ್ರಜ್ಞನಾಗಿದ್ದ ತೇಜಸ್ವಿ ಮಾತ್ರ ಆ ಸಂದರ್ಭದಲ್ಲಿ ಕವಿಗಿಂತಲೂ ಸ್ಥಿತಪ್ರಜ್ಞನಾಗಿ-
ದೂರ ಮೈಸೂರಿನಲ್ಲಿ, ಮನೆ ’ಉದಯರವಿ’ಯಲ್ಲಿ,
ಮಗಳು ತಾರಿಣಿ ಗುಡಿಸಿ, ದೇವರ ಮನೆಯ ತೊಳೆದು,
ಹೂ ಮುಡಿಸಿ, ಸೊಡರ ಹೊತ್ತಿಸಿ, ಊದುಕಡ್ಡಿಯಿಟ್ಟು
ಒಂದು ವಾರದ ವರೆಗೆ ದೂರ ಪಯಣಕೆ ಹೋದ
ತಂದೆಯನು ನೆನೆದು
"ಸುಗಮವಾಗಲಿ ದೇವ, ಅಣ್ಣನಿಗೆ ಪಯಣ!
ಕ್ಷೇಮವಾಗಿಯೆ ಅಣ್ನ ತಿರುಗಿ ಬರಲಿ!"
"ಇಲ್ಲ, ಅಣ್ಣಾ, ಕಾರು ಹಾಳಾಗುತ್ತದೆಎನ್ನುತ್ತಾನೆ. ರಸ್ತೆ ಎಡಕ್ಕೆ ಕಾರು ನಿಲ್ಲುತ್ತದೆ. ಮತ್ತೆ ಎಲ್ಲರೂ ಕೆಳಗಿಳಿಯುತ್ತಾರೆ. ಕೆಳಗಿಳಿದ ಕವಿಗೆ ಕಂಡ ನೋಟವಿದು.
ಹೀಗೇ ನಾವು ಮುಂದುವರಿದರೆ.
ಟೈರ್ ರಾಡ್ ಎಂಡ್ ಅಲೈನ್ಮೆಂಟ್ ನೋಡಿದರೆ
ಸರಿಹೋಗಬಹುದೇನೋ!"
ಗಡ್ಡ ಬಿಳಲಿಳಿದ ಹಸುರಿನ ದಟ್ಟ ಹೇರಾಲಗಳ ಹಂತಿಕವಿ ಸಿಡ್ಲೆಹಳ್ಳಿಯನ್ನು ಸುತ್ತಲೂ ಹುಡುಕುತ್ತಾರೆ. ಹಳ್ಳಿ ಕಾಣುವುದಿಲ್ಲ. ಆದರೆ ಹತ್ತಿರದಲ್ಲೆಲ್ಲೋ ಹಳ್ಳಿಯಿದ್ದಿರಬೇಕು ಎನ್ನುವುದಕ್ಕೆ ಸಾಕ್ಷಿಯಾಗಿ ಏಳೆಂಟು ವರ್ಷದ ಹುಡುಗನೊಬ್ಬ ಕುತೂಹಲದಿಂದ ಕಾರನ್ನು ನೋಡುತ್ತಾ ನಿಲ್ಲುತ್ತಾನೆ. ಡ್ರೈವರ್-ತೇಜಸ್ವಿ ಮಾತ್ರ ಕರ್ಮಯಜ್ಞದಲ್ಲಿ ತಲ್ಲೀನರಾಗಿಬಿಟ್ಟಿರುತ್ತಾರೆ.
ಸಾಲು ಸಾಲಾಗಿ ನಿಂತು ರಸ್ತೆಯಿಕ್ಕೆಲದಲ್ಲಿ
ನಮಗೆ ಗೌರವ ರಕ್ಷೆ ನೀಡಿದ್ದುವು.
ಕಾರ್ತಿಕದ ಹಿತ ಬಿಸಿಲು ಹಸುರು ಹೊಲಗಳ ಮೇಲೆ
ಹುಲುಸಾಗಿ ಹಸರಿಸಿತ್ತು.
ಹಣ್ಣು ತುಂಬಿದ ಆಲ ಹಕ್ಕಿಗಳನೌತಣಕೆ ಕರೆದಿತ್ತು:
ಲಕ್ಷ ಪಕ್ಷಿಯ ಕೊರಲು ಕಿವಿಗಿಂಪ ಸುರಿದಿತ್ತು.
ದಾರಿ ಬದಿ ಕಲ್ಲಬೋರ್ಡಿನೊಳಿತ್ತು ಬರೆಹ:
"ಸಿಡ್ಲೆಹಳ್ಳಿ!"
ಜಾಕ್-ಟೈರ್ ಲಿವರ್-ಸ್ಪಾನರ್-ಚಕ್ರಕ್ಕೆ ಕಲ್ಲಾಪು.ಆ ಕ್ಷಣ ಕವಿಗನ್ನಿಸಿದ್ದು "ಛೆ ಛೆ ಛೆ! ಏನಪಾಯವಾಗುತಿತ್ತು!!...." ಎಂದು. ಇತ್ತ ಇಷ್ಟೆಲ್ಲಾ ನಡೆಯುತ್ತಿರಬೇಕಾದರೆ, ಅತ್ತ ಉದಯರವಿಯಲ್ಲಿ ತಾರಿಣಿಯ ಪ್ರಾರ್ಥನೆ ಮುಂದುವರೆದು ಮುಗಿಯುವ ಹಂತ ತಲುಪಿತ್ತು!
ಟೈರ್ ರಾಡ್ ಎಂಡ್ ಅಲೈನ್ಮೆಂಟ್ ನೋಡಲಿಕ್ಕೆ
ಕಾರಿನಡಿ ಹೊಟ್ಟೆ ಮೇಲಾಗಿ ಮಲಗಿದನು ಡ್ರೈವರ್.
"ಓ ಹೋ ಹೋ ಹೋ ಅಣ್ಣಾ!"
"ಏನೋ?" ಕೇಳಿದನು ತೇಜಸ್ವಿ.
"ಟೈರ್ ರಾಡ್ ಎಂಡ್ ಅಲೈನ್ಮೆಂಟ್ ಅಲ್ಲ...."
"ಮತ್ತೇನೋ?"
"ಫ್ರಂಟ್ ವ್ಹೀಲ್ ಮೆಯ್ನ್ ಸ್ಪ್ರಂಗ್ ಸ್ಕ್ರೂ ಬಿದ್ದು ಹೋಗಿದೆ!"
’ಉದಯರವಿ’ಯ ದೇವರ ಮನೆಯಲ್ಲಿತಾರಿಣಿಯ ಪ್ರಾರ್ಥನೆ, ಕವಿಯ ಕನಸು, ಡ್ರೈವರನ ಅನುಭವ, ತೇಜಸ್ವಿಯ ಕ್ರಿಯಾಶೀಲತೆಯ ಫಲವಾಗಿ ಕಾರು ಸರಿ ಹೋಗುತ್ತದೆ. ಪಯಣ ಮುಂದುವರೆಯುತ್ತದೆ. ಪಯಣ ಮುಗಿದು, ಬಹುಶಃ ಒಂದು ವಾರದ ನಂತರ ಮೈಸೂರಿಗೆ ಹಿಂದಿರುಗಿದ ಮೇಲೆ, ೨೬.೧೧.೧೯೫೬ರಂದು ಪ್ರಯಾಣದ ಅನುಭವವನ್ನು, ಕಾರಿನಿಂದ ಉಂಟಾದ ಪರಿಪಾಟಲನ್ನು ಮನೆಯಲ್ಲಿ ಮಾತನಾಡುತ್ತಿದ್ದಾಗ, ಆ ಸಮಯದಲ್ಲಿ ಉದಯರವಿಯ ದೇವರ ಮನೆಯಲ್ಲಿ ತಾರಿಣಿ ದೀಪ ಬೆಳಗಿಸುತ್ತಿದ್ದ ವಿಚಾರ ಕವಿಗೆ ತಿಳಿದಿರಬೇಕು. ಅಂದೇ ’ಸಿಡ್ಲೆಹಳ್ಳಿ ಮತ್ತು ತಾರಿಣಿಯ ಪ್ರಾರ್ಥನೆ’ ಎಂಬ ಮೇಲಿನ ಕವಿತೆ ರಚಿತವಾಗಿದೆ.
ಪ್ರಾರ್ಥಿಸುತ್ತಿದ್ದ ತಾರಿಣಿಯ ಕೈ ಮುಗಿಯುತಿತ್ತು.
ಆಗಳಾಗಳೆ ಮುಗಿಯುತಿತ್ತು
ಪ್ರಾರ್ಥನೆಯೂ:
"ಸುಮಗಮವಾಗಲಿ, ದೇವ, ಅಣ್ಣನಿಗೆ ಪಯಣ!
ಕ್ಷೇಮವಾಗಿಯೆ ಅಣ್ಣ ಹೋಗಿಬರಲಿ!"
-ಸೌಮಿತ್ರಿ ತಾಂ’ಪೇಳ್ವಳೆಂತಯ್ ಮಂತ್ರಮಂ’ ಎನ್ನುವ ಕವಿ, ಸತಿಶಿರೋಮಣಿಯಾದ ಊರ್ಮಿಳೆ ತಳೆದ ದಿಟ್ಟ ನಿಲುವನ್ನು ಹೀಗೆ ಪ್ರತಿಪಾದಿಸಿದ್ದಾರೆ.
ನಿನ್ನನುಮತಿಯನಣ್ಣನೊಡನಡವಿಗೈದಲ್ಕೆ ಪೇಳ್
ಬೇಡಿದನೆ? ಭ್ರಾತೃಭಕ್ತಿಯ ಸಂಭ್ರಮಾಧಿಕ್ಯದೊಳ್
ಪ್ರೀತಿಯಿಂ ಬೀಳ್ಕೊಳ್ವುದಂ ತಾಂ ಮರೆಯನಲ್ತೆ?
ಮರೆಯನೆಂದುಂ ಸುಮಿತ್ರಾತ್ಮಜಂ! ಪೇಳ್ದನೇನಂ,
ಪೇಳ್, ಬನಕೆ ನಡೆವಂದು?
ಪ್ರಾಣೇಶಅಂದು ಊರ್ಮಿಳೆ ಕಟ್ಟಿದ ಚಿತ್ತಪೋಮಂಗಳದ ಶ್ರೀರಕ್ಷೆಯಿದ್ದುದರಿಂದಲೇ ರಾಮ ಲಕ್ಷ್ಮಣರಿಗೆ, ಸೀತೆಗೆ ಎಲ್ಲ ರೀತಿಯ ಅಗ್ನಿ ಪರೀಕ್ಷೆಯನ್ನು ಗೆದ್ದು ಬರಲು ಸಾಧ್ಯವಾಯಿತು. ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯಲ್ಲಿ ಮದುವೆ ಮನೆಯಿಂದ, ಪೀಂಚಲು ಜೊತೆ ಹೊರಬಿದ್ದ ಚಿನ್ನಮ್ಮ, ಮಾರಿಯಮ್ಮನ ಗುಡಿಯಲ್ಲಿ, ತನ್ನ ಮತ್ತು ತನ್ನಿನಿಯನ ಕ್ಷೇಮ ಕಾತರಳಾಗಿ ಮಾರಿಯಮ್ಮನ ಪದತಲದಲ್ಲಿ ದೀನಳಾಗಿ ಬೇಡುತ್ತಿರುವುದನ್ನು, ಅದೇ ಸಮಯದಲ್ಲಿ, ದೂರದ ಕಲ್ಕತ್ತಾದ ವರಾಹನಗರದಲ್ಲಿದ್ದ ಹಾಳುಮನೆಯ ಮಠದಲ್ಲಿ, ತರುಣ ಸನ್ಯಾಸಿಯೊಬ್ಬನು, ತಾನು ಗುರುಕೃಪೆಯಿಂದ ಕಂಡ ದರ್ಶನದ ಫಲವಾಗಿ, ತಾನು ಕಂಡ ಆ ಹೆಣ್ಣುಮಗಳ ಸಂಕಟ ಏನಿದ್ದರೂ ಪರಿಹಾರವಾಗಿ, ಆಕೆಗೆ ತಾಯಿ ಕೃಪೆಮಾಡಲಿ! ಎಂದು ತಪೋರಕ್ಷೆಯನ್ನು ಕಟ್ಟುತ್ತಾನೆಯಲ್ಲವೆ!? ಕಾವ್ಯರಂಗದಲ್ಲಿಯಂತೊ, ಅಂತೆಯೇ ಲೋಕರಂಗದಲ್ಲಿ ಯಾರ್ಯಾರ ಮಂಗಳಕ್ಕಾಗಿ ಯಾರ್ಯಾರು, ಕಾಲ ದೇಶಗಳನ್ನು ಮೀರಿ ತಪೋಮಂಗಳದ ಶ್ರೀರಕ್ಷೆಯನ್ನು ಕಟ್ಟುತ್ತಿದ್ದಾರೋ ಬಲ್ಲವರು ಯಾರು? ಅಣ್ಣನ ಕ್ಷೇಮಕ್ಕಾಗಿ ಮಾಡಿದ ತಾರಿಣಿಯ ಪ್ರಾರ್ಥನೆಯೂ ಅಂತಹುದೊಂದು ತಪೋಶ್ರೀರಕ್ಷೆಯೇ ಆಗಿದ್ದಿರಬಹುದಲ್ಲವೆ?
ಲಕ್ಷ್ಮಣಂ ರಾಮ ಸೀತೆಯರೊಡನಯೋಧ್ಯೆಯಂ
ಬಿಟ್ಟಂದುತೊಟ್ಟು, ಸರಯೂನದಿಯ ತೀರದೊಳ್
ಪರ್ಣಕುಟಿಯಂ ರಚಿಸಿ, ಚಿರ ತಪಸ್ವಿನಿಯಾಗಿ
ಕಟ್ಟಿದಳ್ ಚಿತ್ತಪೋಮಂಗಳದ ರಕ್ಷೆಯಂ
ಮೈಥಿಲಿಗೆ ರಾಮಂಗೆ ಮೇಣ್ ತನ್ನಿನಿಯ ದೇವನಿಗೆ!
ರಾಮನ ಕಿರೀಟದಾಎನ್ನುವ ವಿಶ್ವಭಾವದ ಕವಿಗೆ, ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯ ಮೊದಲಲ್ಲಿ ಹೇಳಿರುವಂತೆ-
ರನ್ನವಣಿಯೋಲೆ ರಮ್ಯಂ, ಪಂಚವಟಿಯೊಳ್
ದಿನೇಶೋದಯದ ಶಾದ್ವಲದ ಪಸುರ್ ಗರುಕೆಯೊಳ್
ತೃಣಸುಂದರಿಯ ಮೂಗುತಿಯ ಮುತ್ತುಪನಿಯಂತೆ
ಮಿರುಮಿರುಗಿ ಮೆರೆವ ಹಿಮಬಿಂದುವುಂ.
ಇಲ್ಲಿಯಾರೂ ಮುಖ್ಯರಲ್ಲ;
ಯಾರೂ ಅಮುಖ್ಯರಲ್ಲ;
ಯಾವುದೂ ಯಃಕಶ್ಚಿತವಲ್ಲ!
ಇಲ್ಲಿಯಾವುದಕ್ಕೂ ಮೊದಲಿಲ್ಲ;
ಯಾವುದಕ್ಕೂ ತುದಿಯಿಲ್ಲ;
ಯಾವುದೂ ಎಲ್ಲಿಯೂ ನಿಲ್ಲುವುದೂ ಇಲ್ಲ;
ಕೊನೆ ಮುಟ್ಟುವುದೂ ಇಲ್ಲ!
ಇಲ್ಲಿಅವಸರವೂ ಸಾವಧಾನದ ಬೆನ್ನೇರಿದೆ!
ಇಲ್ಲಿಎಲ್ಲಕ್ಕೂ ಇದೆ ಅರ್ಥ;
ಯಾವುದೂ ಅಲ್ಲ ವ್ಯರ್ಥ;
ನೀರೆಲ್ಲ ಊ ತೀರ್ಥ!
ಕನಸು ನನಸಾಯಿತಿದೊ ಏಕೈಕ ಕರ್ನಾಟಕ:
ಕಣ್ನಟ್ಟು ಬಯಸಿ ಕಾಣ್ ದಿಕ್ತಟಧ್ವಜಪಟ!
ಪಂಪರನ್ನರ್ ಕುಮಾರವ್ಯಾಸ ಲಕ್ಷ್ಮೀಶ
ಹರಿಹರಾದಿಗಳುಸಿರ್ ನಮ್ಮೊಳಿರ್ಪನ್ನೆಗಂ
ಅಳುಕದೀ ಕನ್ನಡಂ, ಅಳಿಯದೀ ಕನ್ನಡಂ
ಉಳಿವುದೀ ಕನ್ನಡಂ!
ಅಖಂಡ ಕರ್ಣಾಟಕ:
ಅಲ್ತೊ ನಮ್ಮ ಕೂಗಾಟದ ರಾಜಕೀಯ ನಾಟಕ!
ಹರುಸಿತಿಹನು ದೇವ ಗಾಂಧಿ;
ಮಂತ್ರಿಸಿಹುದು ಋಷಿಯ ನಾಂದಿ;
ತನಗೆ ತಾನೆ ಋತಸ್ಯಂದಿ
ಅವಂದ್ಯೆ ಕವಿಯ ಕಲ್ಪನೆ!
ಒರ್ವನಾದೊಡೋರ್ವನಲ್ತು:
ಶಕ್ತಿ ಸರ್ವನಲ್ಪನೆ?
ಹಿಂದದೊಂದು ಹಿರಿಯ ಕನಸು:
ಇಂದು ಕೋಟಿ ಕೋಟಿ ಮನಸು
ಕೂಡಿ ಮೂಡಿ ನಿಂದ ನನಸು!
ತಡೆವುದೇನೊ ನಿನ್ನ ಕಿನಿಸು
ಒಣರುವಲ್ಪ ಜಲ್ಪನೆ?
ಭುವನ ವಂದ್ಯೆ, ಕೇಳ್, ಅವಂಧ್ಯೆ
ಕವಿಯ ವಿಂಧ್ಯಕಲ್ಪನೆ!
ಅಖಂಡ ಕರ್ಣಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!
ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವೊಂದು ಕೃತಕವಲ್ತೊ
ಸಿರಗನ್ನಡ ಸರಸ್ವತಿಯ
ವಜ್ರಕರ್ಣಕುಂಡಲ!
ಅಖಂಡ ಕರ್ಣಾಟಕ:
ಅಲ್ತೊ ನಮ್ಮ ನಾಲ್ಕು ದಿನದ ರಾಜಕೀಯ ನಾಟಕ
ನೃಪತುಂಗನೆ ಚಕ್ರವರ್ತಿ!
ಪಂಪನಲ್ಲಿ ಮುಖ್ಯಮಂತ್ರಿ!
ರನ್ನ ಜನ್ನ ನಾಗವರ್ಮ
ರಾಘವಾಂಕ ಹರಿಹರ
ಬಸವೇಶ್ವರ ನಾರಣಪ್ಪ
ಸರ್ವಜ್ಞ ಷಡಕ್ಷರ:
ಸರಸ್ವತಿಯೆ ರಚಿಸಿದೊಂದು
ನಿತ್ಯ ಸಚಿವ ಮಂಡಲ,
ತನಗೆ ರುಚಿರ ಕುಂಡಲ!
ಅಖಂಡ ಕರ್ಣಾಟಕ:
ಅಲ್ತೊ ನಮ್ಮ ಕೀರ್ತಿಶನಿಯ ರಾಜಕೀಯ ನಾಟಕ
ಬರಿಯ ಹೊಟ್ಟೆ ಬಟ್ಟೆಗಲ್ತೊ;
ಪಕ್ಷ ಜಾತಿ ಕಲಹಕಲ್ತೊ;
ಹಮ್ಮು ಬಿಮ್ಮು ಸೊಮ್ಮಿಗಲ್ತೊ;
ಬಣ್ಣ ಚಿಟ್ಟೆ ಬಾಳಿಗಲ್ತೊ;
ಜೋಳವಾಳಿ ಕೂಳಿಗಲ್ತೊ;
ದರ್ಪ ಸರ್ಪ ಕರ್ಕೋಟಕ
ಸ್ವಾರ್ಥ ಫಣಾ ಕ್ರೀಡೆಗಲ್ತೊ;
ರಾಜಕೀಯ ಪೇಟಕ,
ಅಖಂಡ ಕರ್ಣಾಟಕ!
ಅಖಂಡ ಕರ್ಣಾಟಕ:ಸರಸ್ವತಿಯೆ ರಚಿಸಿದೊಂದರಾಜಕೀಯ ತ್ರೋಟಕ!
ಮೆರೆಯಲಾತ್ಮ ಸಂಸ್ಕೃತಿ;
ಬೆಳಗೆ ಜೀವ ದೀಧ್ಮಿತಿ;
ಪರಮಾತ್ಮನ ಚರಣದೀಪ್ತಿ
ಶರಣ ಹೃದಯಗಳಲಿ ಹೊತ್ತಿ
ಉಸಿರುಸಿರಿನ ಹಣತೆ ಬತ್ತಿ
ಉರಿಯಲೆಂದು ತಣ್ಣಗೆ;
ಬಾಳ ಸೊಡರ್ಗುಡಿಯ ನೆತ್ತಿ
ತನ್ನ ಮುಡಿಯ ಬಾನಿಗೆತ್ತಿ
ಸೊಗಸಲೆಂದು ರಸಸ್ಫೂರ್ತಿ
ಭಗವಂತನ ಕಣ್ಣಿಗೆ;
ಹಾಡುತಿಹೆನು ಕಂಡ ನಾನು;
ದಿಟ್ಟಗೇಡೊ? ಹುಟ್ಟು ಕುರುಡೊ?
ಬುದ್ಧಿ ಬರಡೊ? ಬೇರೆ ಹುರುಡೊ?
ಮೆಳ್ಳಗಣ್ಣ, ಕಾಣೆ ನೀನು!
ಹೇಳು! ತಪ್ಪು ನನ್ನದೇನು?
ಕರ್ಣಾಟಕ ಎಂಬುದೇನು
ಹೆಸರೆ ಬರಿಯ ಮಣ್ಣಿಗೆ?
ಮಂತ್ರ ಕಣಾ! ಶಕ್ತಿ ಕಣಾ!
ತಾಯಿ ಕಣಾ! ದೇವಿ ಕಣಾ!
ಬೆಂಕಿ ಕಣಾ! ಸಿಡಿಲು ಕಣಾ!
ಕಾವ ಕೊಲುವ ಒಲವ ಬಲವ
ಪಡೆದ ಚಲದ ಚಂಡಿ ಕಣಾ
ಋಷಿಯ ಕಾಣ್ಪ ಕಣ್ಣಿಗೆ!
ವಿರೋಧಿಗಾಸ್ಪೋಟಕ,
ಕಂಡ ಕವಿಗಖಂಡ ದೇವಿ ಕಣಾ ಕರ್ಣಾಟಕ!
ಸರಸ್ವತಿಯೆ ರಚಿಸೊಂದರಾಜಕೀಯ ತ್ರೋಟಕ!
ವಿರೋಧಿಗಾಸ್ಫೋಟಕ,
ಅಖಂಡ ಕರ್ಣಾಟಕ:
ಅಲ್ತೊ ನಮ್ಮ ನರ್ತಿಪೊಂದು ರಾಜಕೀಯ ನಾಟಕ!
ಅಖಂಡ ಕರ್ಣಾಟಕ!
ಅಖಂಡ ಕರ್ಣಾಟಕ!
ಜಯ್ ಜಯ್ ಜಯ್ ಅಖಂಡ ಕರ್ಣಾಟಕ!
ದೀಕ್ಷೆಯ ತೊಡು ಇಂದೇ;
ಕಂಕಣ ಕಟ್ಟಿಂದೇ!
ಕನ್ನಡ ನಾಡೊಂದೇ;
ಇನ್ನೆಂದೂ ತಾನೊಂದೇ!
ನೃಪತುಂಗನ ದೊರೆಮುಡಿ ಸಾಕ್ಷಿ!ಪಂಪನ ಪದ ಧೂಳಿಯ ಸಾಕ್ಷಿ!
ಕೂಡಲ ಸಂಗನ ಅಡಿ ಸಾಕ್ಷಿ!
ಗದುಗಿನ ಕವಿದೇವನ ಸಾಕ್ಷಿ!
ದೀಕ್ಷೆಯ ತೊಡು ಇಂದೇ . . . .
ಇಡು ಸಹ್ಯಾದ್ರಿಯ ಮೇಲಾಣೆ!ಇಡು ಕಾವೇರಿಯ ಮೇಲಾಣೆ!
ಇಡು ಚಾಮುಂಡಿಯ ಮೇಲಾಣೆ!
ಇಡು ಗೊಮ್ಮಟ ಗುರುದೇವಾಣೆ!
ದೀಕ್ಷೆಯ ತೊಡು ಇಂದೆ . . . .
ಕಾಣಲಿ ಕನ್ನಡ ವ್ಯೋಮಾಕ್ಷಿ!ನಿಲ್ಲಲಿ ರವಿ ಚಂದ್ರರ ಸಾಕ್ಷಿ!
ಕೇಳಲಿ ಕನ್ನಡ ಪಶು ಪಕ್ಷಿ!
ಸರ್ವ ದೇವರೂ ಶ್ರೀ ಸಾಕ್ಷಿ!
ದೀಕ್ಷೆಯ ತೊಡು ಇಂದೆ . . . .
ಇಡು ನಿನ್ನಯ ಸತಿಯಾಣೆ!ಇಡು ನಿನ್ನಯ ಪತಿಯಾಣೆ!
ಮಕ್ಕಳ ಮೇಲಾಣೆ!
ಅಕ್ಕರೆ ಮೇಲಾಣೆ!
ಗುರುದೇವರ ಆಣೆ!
ನನ್ನಾಣೆ!
ನಿನ್ನಾಣೆ!
ಕನ್ನಡ ಜನರೆಲ್ಲರ ಮೇಲಾಣೆ!
ಕನ್ನಡ ನಾಡೊಂದಾಗದೆ ಮಾಣೆ!
ತೊಡು ದೀಕ್ಷೆಯ! ಇಡು ರಕ್ಷೆಯ!
ಕಂಕಣ ಕಟ್ಟಿಂದೇ
ಇನ್ನೆಂದೂ ತಾನೊಂದೇ!
ಕನ್ನಡ ನಾಡೊಂದೇ!
ಓ ತಾಯಿ ಭಾರತಿಯೆ, ನಿನ್ನ ಮಗಳನು ಹರಸು.
ವರುಷ ಒಂಬತ್ತರಾಚೆಯಲಿ ಬಂಧಮುಕ್ತಳಾದಂದು
ನೀ ಕಂಡ ಕನಸು,
ಎರಡು ಕೋಟಿಯ ಹೃದಯದಲಿ ಶತಮಾನದಿಂ ಕುದಿದ ಒಮ್ಮನಸು,
ದುರ್ಮುಖಿಯೆ ಸುಮುಖಿ ತಾನಾದ ದೀವಳಿಯ ಸುದಿನದಂದು
ತಾನಾಗಿಹುದು ನನಸು!
ಓ ಏಳು, ನೃಪತುಂಗದೇವ,
ಕೃಪೆಯಿಟ್ಟು ಕವಿರಾಜದರಮನೆಯ ಸಿಂಹಾಸನವನಿಳಿದು ಬಾ
ಕರ್ಣಾಟಕದ ನಿನ್ನ ಈ ಹೆಸರ ತಾಯ್ನೆಲಕೆ.
ನೀನಂದು ಹಾಡಿದಾ ಕನ್ನಡದ ನಾಡು
ಒಂದುಗೂಡಿದೆ ಇಂದು ಇದೊ ಬಂದು ನೋಡು.
ಸತ್ತಂತಿಹರನು ಬಡಿದೆಚ್ಚರಿಸು;
ಕಚ್ಚಾಡುವರನು ಕೂಡಿಸಿ ಒಲಿಸು.
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು;
ಒಟ್ಟಿಗೆ ಬಾಳುವ ತೆರದಲಿ ಹರಸು!
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯಶಿವ!
ಆನಂದನೊಡಗೂಡಿ ಸಂಜೆಯಲಿ ಸಂಚರಿಸೆ
ಆಶ್ರಮವನುಳಿದು ಪಡುವಣದೆಸೆಗೆ ತಿರುಗಿದೆನು
ಒಟಿಕೊಪ್ಪಲಿನಾಚೆ ಹಬ್ಬಿರುವ ದಿಬ್ಬಕ್ಕೆ.
ನಮ್ಮ ಬಲ ಭಾಗದಲಿ ಮೈಸೂರು ಚಾಮುಂಡಿ;
ಎದುರಿನಲಿ ಉತ್ತು ಬಿತ್ತಿದ ಹೊಲದ ಹಸುರಿನಲಿ
ಅಲ್ಲಲ್ಲಿ ಬೆಳೆದ ಮರಗಳು; ದೂರ ದೂರದಲಿ
ಅಲೆಯೇರಿ ಹಾರಿಬಹ ಬಯಲುಸೀಮೆಯ ಭೂಮಿ;
ಎಡದ ಭಾಗದಲೊಂದು ಹಿರಿಯ ದಿಣ್ಣೆಯ ಬೋರೆ
ಸಂಜೆಗೆಂಪಿನ ಬಾನಿಗೆದುರಾಗಿ ಹಬ್ಬಿತ್ತು;
ಹಿಂದುಗಡೆ ಹೊಲ, ಹಳ್ಳಿ. ಆ ಸೊಬಗು, ಆ ಶಾಂತಿ,
ಆ ಮಧುರ ನಿರ್ಜನತೆ, ಹಲಕೆಲವು ಪಕ್ಷಿಗಳ
ಕೂಜನದಿ ಹೊರೆಯೇರುತಿದ್ದ ಆ ನೀರವತೆ,
ಎಲ್ಲವೂ ಭವ್ಯತೆಯ ಸೀಮೆಯಲ್ಲಿ ನೆಲೆಸಿತ್ತು!
ಕಬ್ಬಿಗನು ಕತೆಗಾರರಿಬ್ಬರೂ ಮಾತುಳಿದು
ಗಾಢವಾಗುತಲಿದ್ದ ಧ್ಯಾನದಲಿ ಮುಳುಗಿದರು!
ಸ್ವರ್ಣವರ್ಣದ ಲಕ್ಷ ಪುಷ್ಪಗಳ ಶೋಭೆಯಲಿ
ಮೆರೆದಿದ್ದ ಹುಚ್ಚೆಳ್ಳು ಗಿಡಗಳಾ ಹೊಲದಲ್ಲಿ,
ರೈತನೊಬ್ಬನು ತನ್ನ ಕಾರ್ಯದಲಿ ತೊಡಗಿದುದು.
ಎನಿತು ಆದರವೆನಿತು ವಾತ್ಸಲ್ಯವೆನಿತೊಲ್ಮೆ!
ಆ ಮಾತಿನಾ ಮೋಹದಿಂಪಿನಲಿ ಸೆರೆಸಿಕ್ಕಿ
ಮರುಳಾಗಿ ಮುಗ್ಧಭಾವದಿನಲ್ಲಿ ಕುಳಿತುಬಿಡೆ,
ಮೆಲುಮೆಲನೆ ಮಾತು ತೆಗೆದನು ನೇಗಿಲಿನ ಯೋಗಿ.
ಅವನ ಮೈಯಲ್ಲಿ ಹರಕು ಅಂಗಿ; ಮೊಳಕಾಲಿನಲಿ
ಚಿಂದಿ ಪಂಚೆ: ಆ ಮನೋಹರ ಮಂಗಳದ ಮೂರ್ತಿ!
ಮುಳುಗುತಿಹ ಕನಕಮಯ ಸಂಧ್ಯೆಯ ದಿವಾಕರನು,
ಬೈಗುವೆಣ್ಣಿನ ಕುಂಕುಮದ ಮಂಗಳಾರತಿಯು,
.............. ........... ......... ಮಿಗಿಲೆನಿಸಿ ಆ
ಹಸುರು ಹುಚ್ಚೆಳ್ವೊಲದ ಪುಷ್ಪಿತ ಹರಿದ್ರದಲಿ
ರೈತನೆಸೆದನು ತನ್ನ ಶುಭದ ದಾರಿದ್ರ್ಯದಲಿ!
ಮೂರು ಎಕ್ಕರೆ ಭುಮಿ ನನಗಿಹುದು, ಬುದ್ದಿ. ಅದು
ನಮ್ಮ ತಂದೆಯ ತಂದೆ ಕೊಂಡಿದ್ದು, ಆರ್ನೂರು
ರುಪಾಯಿ ನಗದು ಹಣ ಸುರಿದು ಸರಕಾರಕ್ಕೆ
ಕೊಂಡುದಿದು. ಆದರೂ ವರುಷ ವರುಷವು ನಾವು
ಕಂದಾಯ ಕೊಡಬೇಕು! ಆರುವರೆ ರುಪಾಯಿ!
............. ಹಿರಿಯರಿತ್ತೀ ನೆಲವ
ತೆರಿಗೆ ಕೊಡದೆಯೆ ನಾವು ಪರರ ವಶಮಾಡಿದರೆ
ಮಕ್ಕಳಾದಪೆವೆಂತು ನಾವವರಿಗೆ? ಮುಂದೆಮಗೆ
ಒಳಿತಹುದೆ? ನಾವಿಬ್ಬರಣ್ಣತಮ್ಮದಿರಿಹೆವು.
ಅಣ್ಣನಿಗೆ ಮಗನೊಬ್ಬ; ಮದುವೆಯಾಗಿಹುದವಗೆ;
ಮಕ್ಕಳೆರಡಿವೆ; ನಿಮ್ಮ ವಯಸವಗೆ. ನನಗೊಬ್ಬ
ಮಗನಿಹನು. ಮನೆಯಲ್ಲಿ ಹೆಂಗಸರು ಬೇರಿಹರು.
ಇಷ್ಟು ಜನರಿಗೆ ಹೊಟ್ಟೆ ಬಟ್ಟೆಯಂದರೆ ಎಲ್ಲಿ
ಹಣಕಾಸು? ಹೇಗೊ ಸಾಲದ ಮೇಲೆ ಬಡಬದುಕು
ಹೊರೆಯುತಿದೆ
................ ದೂರ ಮೈಸೂರಿನಲಿ
ಮಿಂಚಿದುವು ದೀಪಗಳು ಐಶ್ವರ್ಯಗರ್ವದಲಿ.
ಮೇಲೆ ಆಕಾಶದಲಿ ಮಿಣುಕಿದುವು ತಾರೆಗಳು
ವಿಶ್ವದೌದಾಸೀನ್ಯದಲಿ? ಅಥವ ಶೋಕದಲಿ?
ಕತ್ತಲಲಿ ರೈತನಾಕೃತಿಯೊಂದು ಕನಸಿನ ತೆರದಿ
ಕಾಣಿಸಿತು: ಅವನೊಂದು ವಿಶ್ವದ ಮಹಾಸ್ವಪ್ನ!
ಬೇಡ ಬೇಡೈ, ನೀನು ಗುಡಿಗೆ ನಡೆ; ಹಗಲೆಲ್ಲ
ಉಣಿಸಿಲ್ಲ, ಹಸಿದಿರುವೆ, ದುಡಿದು ಮೈದಣಿದಿರುವೆ.
............. ಒಂದು ಗಂಟೆಯ ನುಡಿಗೆ
ಅವನದೆಂತಹ ಮೈತ್ರಿ! ನಾಗರಿಕರಂತಿಹರೆ?
ಆತನು ಅನಾಗರಿಕನೆ? ಅವನ ಆ ದುಃಖದಲಿ
ಹೆರರ ಸುಖವನು ಕಂಡು ಕುದಿವ ಕರುಬಿನಿತಿಲ್ಲ;
ತನ್ನ ನೋವನು ಕುರಿತು ನುಡಿವಾಗ ಮಾತಿನಲಿ
ಕ್ರೋಧ ಮತ್ಸರವಿಲ್ಲ, ಕೋಪವೆಂಬುವುದಿಲ್ಲ.
ಸ್ಥಿತ ಪ್ರಜ್ಞನಿಗೆ ಸಹಜವಾಗಿಹ ಸಹಿಷ್ಣುತೆ,
ಧೀರತೆ, ಸೌಜನ್ಯಗಳು ಹುಟ್ಟುಗುಣವವಗೆ.
ನಮ್ಮೊಡನೆ ಯಾರನೂ ಆತನು ಹಳಿಯಲಿಲ್ಲ:
ಎಲ್ಲವನು ಹೇಳಿದನೆ ಹೊರತು ಖಂಡಿಸಲಿಲ್ಲ!
ನಾಗರಿಕರಂತಿಹರೆ? ಆತನು ಅನಾಗರಿಕನೆ?
ಇನಿವಾತುಗಳನಾಡಿ ಕಡೆಗವನ ಬೀಳ್ಕೊಂಡು
ಬರುತಿರಲು, ನಮ್ಮೆದೆ ದುಃಖ ಸಂಮಿಶ್ರಣದ
ಸ್ಮೃತಿಯ ಮಾಧುರ್ಯದಲಿ ಗಂಭೀರವಾಗಿತ್ತು.
ಸ್ವಂತ ಸ್ವಾಂತದ ಚಿಂತೆಯ ತರಂಗಗಳ ಮಧ್ಯೆ
ನಮ್ಮಾತ್ಮಗಳು ತೇಲಿ ಮುಳುಗಿದುವು. ಮೌನದಲಿ,
ಧ್ಯಾನದಲಿ, ಬ್ರಹ್ಮಾಂದ ಭವ್ಯ ಗಾಂಭೀರ್ಯದಲಿ,
ಚಿತ್ತಕೆ ಅತೀತವಹ ಗೂಢತರ ಶಾಂತಿಯಲಿ,
ಜಗದ ವಸ್ತುಗಳೆಲ್ಲ ಮನದಿಂದ ಜಾರುತಿರೆ
ನಡುವೆ ನಿಂತುದದೊಂದೆ ವಿಶ್ವದಾ ಶಿಶುಮೂರ್ತಿ,
ಹಸುರು ಹುಚ್ಚೆಳ್ವೊಲದಿ ಕಂಡ ರೈತನ ಮೂರ್ತಿ!
ನಾನವಗೆ ನುಡಿದಂತೆ ಬಹುಜನಕೆ ನುಡಿದಿಲ್ಲ;
ಅವನಿಗೆ ಕರಗಿದಂತೆ ಬಹುಜನಕೆ ಕರಗಿಲ್ಲ!